ಕೆರೆ-ಬಾವಿ (ಹಯ್ದರಾಬಾದ ಕರ‍್ನಾಟಕ ಸಾಲು: ಸಂಪುಟ 3)


Author: ಬಸವರಾಜ ಕೋಡಗುಂಟಿ

Category: ಸಂಶೋಧನೆ

Publisher: ಬಂಡಾರ ಪ್ರಕಾಶನ

Year of Publication: 2018


Price: ₹120 ₹96

Qty:

Description

ಹಯ್ದರಾಬಾದ ಕರ‍್ನಾಟಕ ಇತಿಹಾಸದ ಉದ್ದಕ್ಕೂ ವಿಚಿತ್ರ ಶ್ರೀಮಂತಿಕೆಯನ್ನು ಹಲವು ನಿರಿಗೆಗಳಲ್ಲಿ ಹೊಂದು ಸಂಕೀರ‍್ಣ ಮತ್ತು ಸಂಪತ್ಬರಿದ ಬದುಕನ್ನು ಹೊಂದಿದ್ದೂ ಇಂದು ಹಿಂದುಳಿದ ಪ್ರದೇಶವಾಗಿದೆ. ಈ ಪ್ರದೇಶವನ್ನು ಅರ‍್ತ ಮಾಡಿಕೊಳ್ಳುವುದಕ್ಕೆ ಆಳವಾದ ಮತ್ತು ವಿಬಿನ್ನ ವಲಯಗಳ, ಆಯಾಮಗಳ ಅದ್ಯಯನಗಳು ಅವಶ್ಯ. ಇದಕ್ಕೆ ಪೂರಕವಾಗಿ ಹಯ್ದರಾಬಾದ ಕರ‍್ನಾಟಕದ ಮಾಹಿತಿ, ಚರ‍್ಚೆ, ತಿಳುವಳಿಕೆ ಇವೆಲ್ಲ ಕನ್ನಡ ಮತ್ತು ಕರ‍್ನಾಟಕದ ವಿದ್ವತ್ತಿನಲ್ಲಿ ಕಡಿಮೆ. ಈ ಅಂಶಗಳನ್ನು ಗಮನದಲ್ಲಿರಿಸಿಕೊಂಡು ಬಸವರಾಜ ಕೋಡಗುಂಟಿ ಅವರು ಹಯ್ದರಾಬಾದ ಕರ‍್ನಾಟಕ ಸರಣಿಯನ್ನು ತರುತ್ತಿದ್ದಾರೆ.

ಕೆರೆ-ಬಾವಿ ನೀರಿನ ಕೇಂದ್ರಗಳಾಗಿ, ಬದುಕಿಗೆ ಆಸರೆಯಾಗಿ ಬೆಳೆದಿರುವುದರಿಂದ ಒಂದೆಡೆ ಅವು ನಂಬಿಕೆ, ಸಂಪ್ರದಾಯಗಳನ್ನು ಬೆಳೆಸಿಕೊಂಡರೆ ಇನ್ನೊಂದೆಡೆ ಕಲಾತ್ಮಕತೆಯನ್ನೂ ಬೆಳೆಸಿಕೊಂಡವು. ವಿಗ್ನಾನದ ಆಯಾಮವೂ ಇದಕ್ಕಿದೆ. ಇದರೊಂದಿಗೆ ಕೆರೆ-ಬಾವಿಗಳು ಸಾಮಾಜಿಕ, ಆರ‍್ತಿಕ ಆಯಾಮಗಳನ್ನೂ ಹೊಂದಿವೆ. ಈ ಎಲ್ಲ ಆಯಾಮಗಳನ್ನು ಪರಿಚಯಿಸುವಂತ ಬರಹಗಳು ಈ ಸಂಪುಟದಲ್ಲಿ ಇವೆ.